".

Header Ads

ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶ

ಸಮಾಜವಾದಿ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷ , ಉತ್ತರ ಪ್ರದೇಶ ರಾಜ್ಯದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರು ವಯೋಸಹಜ ಅನಾರೋಗ್ಯದಿಂದ  ಇಂದು ನಿಧನ ಹೊಂದಿದರು. ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು  ಗುರುಗ್ರಾಂನ ಮೇದಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 82 ವರ್ಷ ವಯಸ್ಸಿನ ಮುಲಾಯಂ ಅವರಿಗೆ ಗುರುಗ್ರಾಂನ ಮೇದಾಂತ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಖಚಿತಪಡಿಸಿರುವ ಮುಲಾಯಂ ಸಿಂಗ್ ಪುತ್ರ ಅಖಿಲೇಶ್ ಯಾದವ್ 'ನನ್ನ ಪ್ರೀತಿಯ ತಂದೆ, ನಮ್ಮೆಲ್ಲರ ನೆಚ್ಚಿನ ನಾಯಕ ಇನ್ನಿಲ್ಲ' ಎಂದು ಹೇಳಿದ್ದಾರೆ.

1939ರ ನವೆಂಬರ್‌ 22ರಂದು ಜನಿಸಿದ್ದ ಮುಲಾಯಂ ಸಿಂಗ್ ಯಾದವ್ ಅವರು ಉತ್ತರ ಪ್ರದೇಶದ ಅಜಂಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಎಂಪಿ ಆಗಿದ್ದರು. ಅಲ್ಲದೇ ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ರಾಜಕೀಯ ರಂಗದಲ್ಲಿ ಖ್ಯಾತಿ ಪಡೆದಿದ್ದರು.

ಮುಲಾಯಂ ಸಿಂಗ್ ಯಾದವ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಂತಾಪ ಸೂಚಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, 'ಮುಲಾಯಂ ಸಿಂಗ್‌ ಯಾದವ್‌ಜೀ ಅವರದ್ದು ಅಸಾಧಾರಣ ವ್ಯಕ್ತಿತ್ವ. ಜನರ ಸಮಸ್ಯೆಗಳ ಕುರಿತು ಸಂವೇದನಾಶೀಲರಾಗಿದ್ದರಲ್ಲದೇ ವಿನಮ್ರತೆಯ ಮೂಲಕ ತಳಮಟ್ಟದ ನಾಯಕ ಎಂಬ ಪ್ರಶಂಸೆಗೆ ಪಾತ್ರರಾಗಿ ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದರು. ಲೋಕನಾಯಕ ಜೆ.ಪಿ ಮತ್ತು ಲೋಹಿಯಾ ಅವರ ಡಾ.ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಗಿಪಾಗಿಟ್ಟರು' ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ರಾಜ್ಯದ ನಾಯಕರು ಸಂತಾಪ ಸೂಚಿಸಿದ್ದಾರೆ. 

Powered by Blogger.