".

Header Ads

ಅಭಿವೃದ್ಧಿ ಹೊಂದಿದ ಭಾರತಕ್ಕೆ 2023 ಬಜೆಟ್‌ ಭದ್ರ ಬುನಾದಿ



ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸಲು ಅಮೃತ ಕಾಲದ ಮೊದಲ ಬಜೆಟ್ ಇದಾಗಿದ್ದು, ಸಂಸತ್ತಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಬುಧವಾರ) 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದರು.

ಅಪಾರ ಆಕಾಂಕ್ಷೆ ಹೊಂದಿರುವ ಸಮಾಜ, ಕೃಷಿಕರು ಮತ್ತು ಮಧ್ಯಮ ವರ್ಗದ ಜನರ ಕನಸುಗಳನ್ನು ಸಾಕಾರಗೊಳಿಸಲಿದೆ. ದೇಶದ ಮಧ್ಯಮ ವರ್ಗವು ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ಕನಸುಗಳನ್ನು ನನಸಾಗಿಸುವ ಶಕ್ತಿಯಾಗಿದೆ.

ಸಮಾಜದ ವಿವಿಧ ಇಲಾಖೆಗಳನ್ನು ಬಜೆಟ್ ತಲುಪಿದೆ. ಡಿಜಿಟಲ್ ಪಾವತಿಯ ಯಶಸ್ಸನ್ನು ಕೃಷಿ ವಲಯದಲ್ಲಿ ಪುನರಾವರ್ತಿಸಲು, ಡಿಜಿಟಲ್ ಮೂಲಸೌಕರ್ಯಗಳನ್ನು ಹಾಕುವ ಯೋಜನೆ ತರಲಾಗಿದೆ. ಹಾಗೂ ಇನ್ನೂ ಅನೇಕ ಯೋಜನೆಗಳನ್ನು ತರಲಾಗಿದ್ದು ಮುಖ್ಯಾಂಶಗಳು ಈ ಕೆಳಗಿನಂತಿವೆ.

ಯಾವ ಇಲಾಖೆಗೆ ಎಷ್ಟು ಅನುದಾನ? (ಲಕ್ಷ ಕೋಟಿ ರೂಪಾಯಿಗಳಲ್ಲಿ)

ರಕ್ಷಣೆ: 5.94
ರಸ್ತೆ ಹಾಗೂ ಹೆದ್ದಾರಿ: 2.70
ರೈಲ್ವೆ: 2.41
ಗ್ರಾಹಕ ವ್ಯವಹಾರ, ಆಹಾರ & ನಾಗರಿಕ ಪೂರೈಕೆ: 2.06 
ಗೃಹ: 1.96
ರಾಸಾಯನಿಕ ಹಾಗೂ ರಸಗೊಬ್ಬರ: 1.78
ಗ್ರಾಮೀಣಾಭಿವೃದ್ಧಿ: 1.60
ಕೃಷಿ ಹಾಗೂ ರೈತ ಕಲ್ಯಾಣ: 1.25
ದೂರಸಂಪರ್ಕ: 1.23

ಸಿಬಿಐಗೆ ₹946 ಕೋಟಿ 
ಕೇಂದ್ರ ಸರ್ಕಾರ 2023–24ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ₹946 ಕೋಟಿ  ನೀಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅನುದಾನ ಶೇಕಡ 4.4ರಷ್ಟು ಹೆಚ್ಚಾಗಿದೆ. ದೇಶದ ಅತ್ಯುನ್ನತ ತನಿಖಾ ಸಂಸ್ಥೆ ವಿವಿಧ ರಾಜ್ಯಗಳು, ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಿಂದ ಹಸ್ತಾಂತರಿಸಲ್ಪಟ್ಟ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ದೇಶದಲ್ಲಿನ ಬಹುತೇಕ ಅಪರಾಧ ಮತ್ತು ವಂಚನೆ ಪ್ರಕರಣಗಳನ್ನು ಕೈಗೆತ್ತಿಕೊಳ್ಳುತ್ತದೆ. 

ರಕ್ಷಣಾ ವಲಯಕ್ಕೆ ₹5.94 ಲಕ್ಷ ಕೋಟಿ
2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರಕ್ಷಣಾ ವಲಯಕ್ಕೆ ₹5.94 ಲಕ್ಷ ಕೋಟಿ ಮೀಸಲಿಡಲಾಗಿದೆ. ಕಳೆದ ಬಾರಿ ರಕ್ಷಣಾ ವಲಯಕ್ಕೆ ₹5.25 ಕೋಟಿ ಮೀಸಲಿಡಲಾಗಿತ್ತು. 

* ₹7 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ

ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಕೇಂದ್ರ ಬಜೆಟ್‌ನಲ್ಲಿ ಪರಿಷ್ಕರಿಸಲಾಗಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂಪಾಯಿಯಿಂದ 7 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಹೀಗಾಗಿ, 7.ಲಕ್ಷದವರೆಗೆ ಆದಾಯವುಳ್ಳವರಿಗೆ ಯಾವುದೇ ತೆರಿಗೆ ಇರುವುದಿಲ್ಲ.

ಬೆಲೆ ಏರಿಕೆಯಾದ ಸರಕುಗಳ ವಿವರ: ಸಿಗರೇಟ್, ಎಲೆಕ್ಟ್ರಿಕ್ ಚಿಮಣಿ, ಆಮದು ಮಾಡಿಕೊಂಡ ರಬ್ಬರ್, ಚಿನ್ನ, ಬೆಳ್ಳಿ, ಬ್ರಾಂಡೆಡ್ ಬಟ್ಟೆಗಳು, ಪ್ಲಾಟಿನಮ್, ವಜ್ರ, ಎಕ್ಸ್​ರೇ, ಹೆಡ್​ಫೋನ್, ಇಯರ್ ಫೋನ್, ವೈದ್ಯಕೀಯ ಉತ್ಪನ್ನಗಳು ದುಬಾರಿಯಾಗಲಿವೆ.

* ಬೆಲೆ ಕಡಿಮೆಯಾದ ಸರಕುಗಳ ವಿವರ: ಮೊಬೈಲ್ ಫೋನ್, ಲ್ಯಾಪ್‌ಟಾಪ್‌, ಸೈಕಲ್, ಎಲ್​ಇಡಿ ಟಿವಿ, ಟಿವಿ ಪ್ಯಾನಲ್, ಆಟೊಮೊಬೈಲ್, ಜವಳಿ, ಎಲೆಕ್ಟ್ರಿಕ್ ವಾಹನ, ಕ್ಯಾಮೆರಾ ಲೆನ್ಸ್, ಜೈವಿಕ ಅನಿಲ ಆಧಾರಿತ ಉತ್ಪನ್ನಗಳು

* ಕೃಷಿ ವೇಗವರ್ಧಕ ನಿಧಿ ಸ್ಥಾಪನೆ

ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸಲು ಉತ್ತೇಜಕ ಕ್ರಮವಾಗಿ ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು. ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇನ ನೀಡಲಾಗುವುದು. 

ಸೂಕ್ಷ್ಮ ನೀರಾವರಿ ಪ್ರೋತ್ಸಾಹಿಸಲು ಭದ್ರಾ ಮೇಲ್ದಂಡೆಗೆ ₹5,300 ಕೋಟಿ

ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು. 

* 157 ಹೊಸ ನರ್ಸಿಂಗ್ ಕಾಲೇಜು

2014ರ ನಂತರ ಆರಂಭವಾಗಿರುವ 157 ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭಿಸಲಾಗುವುದು. 

* ಪ್ರಧಾನ ಮಂತ್ರಿ ಆವಾಸ್ ಯೋಜನೆ ಶೇಕಡ 66ರಷ್ಟು ವಿಸ್ತರಿಸಲಾಗಿದ್ದು, ಅನುದಾನ ₹79,000 ಕೋಟಿಗೆ ಹೆಚ್ಚಿಸಲಾಗಿದೆ

* ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,800 ಶಿಕ್ಷಕರ ನೇಮಕ

3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ  38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ.

ಶೇ 7.5  ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ ಮಾಡಲು ಮಹಿಳಾ ಸಮ್ಮಾನ್‌ ಅಡಿ ಅವಕಾಶ

ಶೇ 7.5  ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ ಇಡಲು ‘ಮಹಿಳಾ ಸಮ್ಮಾನ್’ ಉಳಿತಾಯ ಪ್ರಮಾಣಪತ್ರದ ಅಡಿಯಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಇದನ್ನು 2025ರ ವರೆಗೆ ವಿಸ್ತರಿಸಲಾಗುತ್ತದೆ. 

* ಒಂದು ಜಿಲ್ಲೆ, ಒಂದು ಉತ್ಪನ್ನಕ್ಕೆ ಪ್ರೋತ್ಸಾಹ

'ಒಂದು ಜಿಲ್ಲೆ ಒಂದು ಉತ್ಪನ್ನ' ವಸ್ತುಗಳು ಮತ್ತು ಜಿಐ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕಾಗಿ ಯೂನಿಟಿ ಮಾಲ್ ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ಉತ್ತೇಜನ ನೀಡಲಾಗುತ್ತದೆ. 

* ಯುವಕರ ಕೌಶಲ್ಯ ತರಬೇತಿಗಾಗಿ ‘ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0’ ಅನ್ನು ಪ್ರಾರಂಭಿಸಲಾಗುವುದು

* ಪ್ರವಾಸೋದ್ಯಮವನ್ನು ಉತ್ತೇಜಿಸಲು 'ಚಾಲೆಂಜ್ ಮೋಡ್' ಮೂಲಕ 50 ಸ್ಥಳಗಳನ್ನು ಆಯ್ಕೆ ಮಾಡಲು ಸರ್ಕಾರ ನಿರ್ಧರಿಸಿದೆ. 


Powered by Blogger.