ವಿಶ್ವ ಯಕ್ಷಗಾನ ಸಮ್ಮೇಳನ ನಡೆಸುವ ಯೋಜನೆಯಿದೆ: ಸುನೀಲ್ ಕುಮಾರ್
ಮಂಗಳೂರು: ಉಡುಪಿಯಲ್ಲಿ ಭಾನುವಾರ ರಾತ್ರಿ ನಡೆದ ರಾಜ್ಯ ಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರು, ಕರ್ನಾಟಕ ಸರ್ಕಾರವು 'ವಿಶ್ವ ಯಕ್ಷಗಾನ ಸಮ್ಮೇಳನ'ವನ್ನು ನಡೆಸಲು ಯೋಜಿಸುತ್ತಿದೆ ಮತ್ತು ಪ್ರಸ್ತಾವನೆಯ ಚರ್ಚೆಗಳು ಆರಂಭಿಕ ಹಂತದಲ್ಲಿವೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಶನಿವಾರ ಹಾಗೂ ಭಾನುವಾರ ನಡೆದ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನಕ್ಕೆ ಸರ್ಕಾರ 2 ಕೋಟಿ ರೂ. ಗಳನ್ನು ಮಂಜೂರು ಮಾಡಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.
ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಯಕ್ಷಗಾನವನ್ನು ವಾರ್ಷಿಕ ಕಾರ್ಯಕ್ರಮವನ್ನಾಗಿ ಮಾಡಲು ನಿರ್ಧರಿಸಲಾಯಿತು. ಮುಂದಿನ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

Post a Comment