ನಾಳೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ-ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ
ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ ನೀಡಲಿದ್ದಾರೆ.
ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ನಡೆಯುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಜ.12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ, 7500 ಯುವಕರು ಪಥಸಂಚಲನ ಮಾಡಲಿದ್ದಾರೆ. ದೇಶದ 28 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳ ಸುಮಾರು 7,500 ಯುವ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಚಟುವಟಿಕೆಗಳು ಧಾರವಾಡದಲ್ಲಿ ನಡೆಯಲಿವೆ.

Post a Comment