".

Header Ads

ಅದಾನಿ ಷೇರು ಸಾಮ್ರಾಜ್ಯ ಪತನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ

 


  ಷೇರುಪೇಟೆಯಲ್ಲಿ ತೀವ್ರ ಮಾರಾಟದಿಂದ ಭಾರೀ ಕುಸಿತ ಕಂಡಿರುವ ಅದಾನಿ ಗ್ರೂಪ್ ವಿರುದ್ಧ ವಂಚನೆಯ ಆರೋಪ ಕುರಿತಂತೆ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರ ನಿಯಂತ್ರಕರಿಗೆ ತಮ್ಮ ಕಾರ್ಯ ನಿರ್ವಹಿಸಲು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.
 
 
 ಷೇರು ಕುಸಿತದ ಹಿನ್ನೆಲೆಯಲ್ಲಿ ಅದಾನಿ ಗ್ರೂಪ್ ಎಫ್ಪಿಒ ರದ್ದುಗೊಳಿಸಿದ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಲು ಹಣಕಾಸು ಸಚಿವರು ನಿರಾಕರಿಸಿದರು. "ಈ ದೇಶದಲ್ಲಿ ಎಷ್ಟು ಬಾರಿ ಎಫ್ಪಿಒಗಳನ್ನು ಹಿಂತೆಗೆದುಕೊಳ್ಳಲಾಗಿದೆ ?ಇದರಿಂದ ಎಷ್ಟು ಬಾರಿ ಭಾರತ ಇಮೇಜ್ಗೆ ಧಕ್ಕೆಯಾಗಿದೆ? ಮತ್ತು ಎಷ್ಟು ಬಾರಿ ಎಫ್ಪಿಒಗಳು ಮರಳಿ ಬಂದಿಲ್ಲ?” ಎಂದು ಅವರು ಮರು ಪ್ರಶ್ನೆ ಹಾಕಿದ್ದಾರೆ.

ಭಾರತದ ವರ್ಚಸ್ಸಿಗೆ ಧಕ್ಕೆ ಇಲ್ಲ ಇದೇ ವೇಳೆ ಅದಾನಿ ಸಮೂಹದ ಹಿನ್ನಡೆಯಿಂದಾಗಿ ಭಾರತದ ವರ್ಚಸ್ಸಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಹೇಳಿರುವ ನಿರ್ಮಲಾ ಸೀತಾರಾಮನ್ ಅವರು, ಭಾರತವು ಉತ್ತಮವಾದ ನಿಯಮಗಳನ್ನು ಹೊಂದಿರುವ ಮತ್ತು ಉತ್ತಮವಾದ ಸರ್ಕಾರಿಸ್ವಾಮ್ಯದ ಹಣಕಾಸು ಮಾರುಕಟ್ಟೆಯನ್ನು ಹೊಂದಿದೆ. ಈ ಬಗ್ಗೆ ನಿಯಂತ್ರಕ ಸಂಸ್ಥೆ ಗಂಭೀರವಾಗಿದೆ. ಎಸ್ಬಿಐ ಆಗಲಿ ಅಥವಾ ಎಲ್ಐಸಿ ಆಗಲಿ ಅದಾನಿ ಗ್ರೂಪ್ಗೆ ಹೆಚ್ಚಿನ ಸಾಲವನ್ನು ನೀಡಿಲ್ಲ. ದೇಶದ ಅತೀ ದೊಡ್ಡ ಬ್ಯಾಂಕ್ ಆದ ಎಸ್ಬಿಐ ಮತ್ತು ದೇಶದ ಅತೀ ದೊಡ್ಡ ವಿಮಾ ಸಂಸ್ಥೆಯಾದ ಎಲ್ಐಸಿ ಈ ಬಗ್ಗೆ ಈಗಾಗಲೇ ವಿವರವಾದ ಮಾಹಿತಿಯನ್ನು ನೀಡಿದೆ.

ಎರಡೂ ಸಂಸ್ಥೆಗಳು ನಿಯಮಕ್ಕೆ ಅನುಗುಣವಾಗಿ, ಲಾಭಕ್ಕೆ ಅನುಗುಣವಾಗಿ ಅದಾನಿ ಗ್ರೂಪ್ ಜೊತೆ ವಹಿವಾಟು ಹೊಂದಿದೆ ಎಂದು ಸ್ಪಷ್ಟಪಡಿಸಿದೆ ಎಂದು ಹೇಳಿದ್ದಾರೆ.
ದೇಶದ ಆರ್ಥಿಕತೆ ಸದೃಢ ಅದಾನಿ ಎಫ್ಪಿಒ ಹಿಂತೆಗೆದುಕೊಳ್ಳುವಿಕೆಯ ಹಿನ್ನೆಲೆಯಲ್ಲಿ ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಭಾರತದ ಸ್ಥಾನವು ದುರ್ಬಲವಾಗಿದೆಯೇ ಎಂದು ಕೇಳಿದಾಗ ಹಣಕಾಸು ಸಚಿವರು, ''ದೇಶದ ಆರ್ಥಿಕತೆಯು ಸದೃಢ ಸ್ಥಿತಿಯಲ್ಲಿದ್ದು, ಅದಾನಿ ಎಂಟರ್ಪ್ರೈಸಸ್ ವಿವಾದದಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಎಫ್ಪಿಒಗಳು ಬಂದು ಹೊರಗೆ ಹೋಗುತ್ತವೆ. ದೇಶದಲ್ಲಿ ಎಫ್ಪಿಒಗಳನ್ನು ಹಲವಾರು ಬಾರಿ ಹಿಂತೆಗೆದುಕೊಳ್ಳಲಾಗಿದೆ ಮತ್ತು ಇದು ಭಾರತದ ಇಮೇಜ್ಗೆ ಯಾವುದೇ ವ್ಯತ್ಯಾಸವನ್ನು ಮಾಡಿಲ್ಲ.

ಪ್ರತಿ ಮಾರುಕಟ್ಟೆಯಲ್ಲೂ ಏರಿಳಿತಗಳು ಸಂಭವಿಸುತ್ತವೆ. ಕಳೆದ 2 ದಿನಗಳಲ್ಲಿ ವಿದೇಶಿ ವಿನಿಮಯ ಮೀಸಲು $ 8 ಶತಕೋಟಿ (US$) ಹೆಚ್ಚಾಗಿದೆ. ನಮ್ಮ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಅಥವಾ ಆರ್ಥಿಕತೆಯ ಚಿತ್ರಣವು ಪರಿಣಾಮ ಬೀರಿಲ್ಲ. ಇದು ಭಾರತದ ಬಗೆಗಿನ ಗ್ರಹಿಕೆ ಮತ್ತು ಅದರ ಶಕ್ತಿ ಅಖಂಡವಾಗಿದೆ ಎಂಬುದನ್ನು ಸಾಬೀತುಪಡಿಸುತ್ತದೆ' ಎಂದು ದೃಢವಿಶ್ವಾಸ ವ್ಯಕ್ತಪಡಿಸಿದರು.
 
Powered by Blogger.