".

Header Ads

ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನ ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ


 
ಪ್ರೀತಿ ಮಾಡಿ ಬೇರೆ ಯುವತಿ ಜೊತೆ ಮದುವೆಯಾಗಿ ಬಂದಿದ್ದ ಪ್ರಿಯಕರನ್ನು ಮಹಿಳೆ ಮನೆಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

  ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ವಿಜಯಶಂಕರ ಆರ್ಯ ಹಾಗೂ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ ಜ್ಯೋತಿ ದೊಡ್ಡಮನಿ ಎನ್ನುವ ಮಹಿಳೆ ಪರಿಚಯವಾಗಿದ್ದು, ಬಳಿಕ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿತ್ತು. ಆದ್ರೆ, ಇದೀಗ ವಿಜಯ್​ ಜ್ಯೀತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಕುಪಿತಗೊಂಡ ಜ್ಯೋತಿ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ್ದಾಳೆ. ಇದರಿಂದ ಪ್ರಿಯಕರ ವಿಜಯಶಂಕರಗೆ ಗಂಭಿರ ಗಾಯಗೊಂಡಿದ್ದಾನೆ.

Powered by Blogger.