ಮತ್ತೆ ಬೀದಿಗಿಳಿದ ರೈತರು- ದೆಹಲಿ, ಚಂಡೀಗಢ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
ಬೆಂಬಲ ಬೆಲೆ ನೀಡಿ ಸೂರ್ಯಕಾಂತಿ ಬೆಳೆ ಖರೀದಿಸದ ಹರಿಯಾಣ ಸರ್ಕಾರ ದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತ ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರಮುಖ ಕುಸ್ತಿಪಟುಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.ಸೂರ್ಯಕಾಂತಿ ಬೆಳೆಗೆ ಬೆಂಬಲ ನೀಡುವಂತೆ ಆಗ್ರಹಿಸಿ ಸೋಮವಾರ ಕುರುಕ್ಷೇತ್ರ ಜಿಲ್ಲೆಯ ಪಿಪ್ಲಿ ಬಳಿಯ ಫ್ಲೈಓವರ್ ಮೇಲೆ ರೈತರು ಜಮಾಯಿಸಿದ್ದರು. ರೈತರ ಪ್ರತಿಭಟನೆಯಿಂದ ದೆಹಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.ತಿಭಟನೆಗೂ ಮುನ್ನ ಕುರುಕ್ಷೇತ್ರದಲ್ಲಿ ಮಹಾಪಂಚಾಯತ್ ನಡೆಸಲಾಯಿತು.

Post a Comment