ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಮೃತ್ಯು
ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿ ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು.
ಬೆಳಗ್ಗೆ ಎದೆನೋವು ಎಂದು ನಗರದ ಬಸವೇಶ್ವರ ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗಮಧ್ಯೆಯೇ ಲಿಂಗರಾಜ್ ಮೃತಪಟ್ಟಿದ್ದಾರೆ.
ಲಿಂಗರಾಜ್ 2007ರ ಬ್ಯಾಚ್ನಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಕಡೂರು, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಯಲ್ಲಿ ಲಿಂಗರಾಜ್ ಸೇವೆ ಸಲ್ಲಿಸಿದ್ದಾರೆ.
Post a Comment