".

Header Ads

ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋದ ವರ ನಾಪತ್ತೆ- ಸಂಭ್ರಮದ ಮನೆಯಲ್ಲಿ ಆತಂಕದ ಛಾಯೆ

 

ತೌಡುಗೋಳಿ- ವರ್ಕಾಡಿ ಕಿಶನ್ ಶೆಟ್ಟಿ ನಾಪತ್ತೆಯಾದ ವರ


 ಜೂ.‌1 ರಂದು ಗುರುವಾರದಂದು ಕಿಶನ್ ಶೆಟ್ಟಿಗೆ ಉಪ್ಪಳ ಮೂಲದ ಪ್ರಸ್ತುತ ಜಪ್ಪಿ‌ನಮೊಗರಿನಲ್ಲಿರುವ ಕುಟುಂಬವೊಂದರ ಉಪನ್ಯಾಸಕಿಯೊಂದಿಗೆ ವಿವಾಹ ನಿಗದಿಯಾಗಿತ್ತು. ವಧುವಿನ ಮನೆಯಲ್ಲಿ ಅದಾಗಲೇ ಅದ್ಧೂರಿ ಮೆಹಂದಿ ಶಾಸ್ತ್ರ ಮುಗಿದಿದ್ದು, ವರನ ಮನೆಯಲ್ಲಿ ಮಂಗಳವಾರ ನಡೆಯಬೇಕಿದ್ದ ಮೆಹಂದಿ ಶಾಸ್ತ್ರಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು.



ಆದರೆ, ಮಧ್ಯಾಹ್ನ ಹಣ್ಣು ತರಲೆಂದು ವರ ಸ್ಕೂಟರ್ ಏರಿ ಮನೆಯಿಂದ ಹೊರಟಿದ್ದ.‌ ಆ ಬಳಿಕ ದೇರಳಕಟ್ಟೆ ತಲುಪುತ್ತಿದ್ದಂತೆಯೇ ಪೊಲೀಸ್ ಮೂಲಗಳ ಪ್ರಕಾರ ಸುಮಾರು ಅರ್ಧ ತಾಸು ಯಾರಲ್ಲಿಯೋ ಫೋನಲ್ಲಿ ಮಾತನಾಡಿದ್ದನಂತೆ. ಆ ಬಳಿಕ ನಾಪತ್ತೆಯಾದ ವರ ಇನ್ನೂ ಮನೆಗೆ ಬಂದಿಲ್ಲ. ಎರಡೂ ಕುಟುಂಬ ಆರ್ಥಿಕವಾಗಿ ಸ್ಥಿತಿವಂತರಾಗಿದ್ದು, ವಧು ವರರ ಮನೆಯಲ್ಲಿ ಸಂಭ್ರಮ ತುಂಬಿ ತುಳುಕಬೇಕಾಗಿತ್ತಾದರೂ ವರನ ನಾಪತ್ತೆ ಪ್ರಕರಣ ದಿಗ್ಭ್ರಮೆ ಮೂಡಿಸಿದೆ. ಕೊಣಾಜೆ ಠಾಣೆಯಲ್ಲಿ ಕಿಶನ್ ತಂದೆ ಐತಪ್ಪ ಶೆಟ್ಟಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.

Powered by Blogger.