".

Header Ads

ಅಮರನಾಥ ಯಾತ್ರೆ: 36 ಗಂಟೆಗಳಲ್ಲಿ ಐವರು ಯಾತ್ರಿಕರ ಸಾವು, ಮೃತರ ಸಂಖ್ಯೆ 24ಕ್ಕೆ ಏರಿಕೆ ,ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಸಾವು

 


ಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಸಾವು ಮುಂದುವರೆದಿದೆ. ಕಳೆದ 36 ಗಂಟೆಗಳಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಕಾಶ್ಮೀರ: ಅಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಸಾವು ಮುಂದುವರೆದಿದೆ. ಕಳೆದ 36 ಗಂಟೆಗಳಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ಬೆಳಿಗ್ಗೆಯಿಂದ ಸಾವನ್ನಪ್ಪಿದ ಐವರ ಪೈಕಿ ಒಬ್ಬ ಸಾಧು ಸೇರಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್ಲಿ ನಾಲ್ಕು ಜನರು ಸಾವನ್ನಪ್ಪಿದರೆ, ಬಾಲ್ಟಾಲ್ ಮಾರ್ಗದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರ ಗುರುತು ಪತ್ತೆಯಾಗಿಲ್ಲ ,ಇವರೆಲ್ಲರೂ ಯಾತ್ರಿಕರು ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ಗುಜರಾತ್ಗೆ ಸೇರಿದವರಾಗಿದ್ದಾರೆ.
 
Powered by Blogger.