ಕಾರ್ಕಳ : ಪುರಸಭೆಯ ಮಾಜಿ ಅಧ್ಯಕ್ಷ, ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರರಾದ ಚಂದ್ರಹಾಸ ಸುವರ್ಣ ವಿಧಿವಶ
ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷರು, ಸಾಮಾಜಿಕ, ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ, ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರರಾದ ಶ್ರೀ ಚಂದ್ರಹಾಸ ಸುವರ್ಣ ಅವರು ಇಂದು ವಿಧಿವಶರಾದರು.
ಸಮಾಜದ ಕುರಿತು ಅತ್ಯಂತ ಕಾಳಜಿ ಹೊಂದಿದ್ದ ಶ್ರೀಯುತರ ನಿಧನದಿಂದ ಕಾರ್ಕಳದ ಜನತೆ ಒಬ್ಬ ಕ್ರಿಯಾಶೀಲ ವ್ಯಕ್ತಿಯನ್ನು ಕಳೆದುಕೊಂಡಂತಾಗಿದ್ದು ಮೃತರು ಪತ್ನಿ, ಮಕ್ಕಳ ಸಹಿತ ಅಪಾರ ಬಂಧು ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

Post a Comment