ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಮಾತುಕತೆ ನಡೆಸಿದ ಬಳಿಕ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ.
Post a Comment