".

Header Ads

ಖ್ಯಾತ ಯಕ್ಷಗಾನ ಕಲಾವಿದ 'ಕುಂಬ್ಳೆ ಶ್ರೀಧರ ರಾವ್' ಹೃದಾಯಘಾತದಿಂದ ನಿಧನ


ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.

1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌, 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಾಗಿದ್ದರು. ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೊದಲಾದ ಮೇಳಗಳಲ್ಲಿ ಆರು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದರು.

ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ಶ್ರೀಧರ ರಾವ್‌ ಪುರುಷ ವೇಷದಲ್ಲಿಯೂ ಮಿಂಚಿದ್ದರು. ದೇವಿ ಮಹಾತ್ಮೆಯ ದೇವಿ, ಸೀತಾ ಪರಿತ್ಯಾಗದ ಸೀತೆ, ಸುದರ್ಶನ ವಿಜಯದ ಲಕ್ಷ್ಮಿ, ದಮಯಂತಿ ಸ್ವಯಂವರದ ದಮಯಂತಿ, ಭೀಷ್ಮ ವಿಜಯದ ಅಂಬೆ ಪಾತ್ರ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಎಡನೀರು ಮಠದ ಸನ್ಮಾನ ಅವರಿಗೆ ದೊರೆತಿವೆ.


Powered by Blogger.