".

Header Ads

ತೆಲಂಗಾಣದಲ್ಲಿ ಭೀಕರ ಅಪಘಾತ – ಬಸ್ ಗೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ ಡಿಕ್ಕಿ 19ಕ್ಕೂ ಅಧಿಕ ಮಂದಿ ಸಾವು

 


ಜಲ್ಲಿಕಲ್ಲು ತುಂಬಿದ್ದ ಟ್ರಕ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಲ್ಲಿದ್ದ 19 ಮಂದಿ ಸಾವನಪ್ಪಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಸೋಮವಾರ ಸಂಭವಿಸಿದೆ.ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಜಲ್ಲಿಕಲ್ಲು ಸಾಗಿಸುತ್ತಿದ್ದ ಬೃಹತ್ ಟ್ರಕ್ ಬಸ್ ಗೆ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಟ್ರಕ್ ಗುದ್ದಿದ ರಭಸದಿಂದಾಗಿ ಟ್ರಕ್ ನಲ್ಲಿದ್ದ ಜಲ್ಲಿಕಲ್ಲುಗಳು ಬಸ್ ನೊಳಗೆ ಬಿದ್ದಿವೆ. ಜಲ್ಲಿಕಲ್ಲುಗಳಲ್ಲಿ ಕೆಲವು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.
ಟ್ರಕ್ ಚಾಲಕ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತ ಸಂಭವಿಸಿದೆಯೇ ಅಥವಾ ಅವನು ತಪ್ಪು ದಿಕ್ಕಿನಲ್ಲಿ ಚಾಲನೆ ಮಾಡುತ್ತಿದ್ದನೇ ಎಂಬುದನ್ನು ನಾವು ಪರಿಶೀಲಿಸಬೇಕಾಗಿದೆ ಎಂದು ಡಿಸಿಪಿ ಹೇಳಿದರು.ಘಟನೆಯ ಸಮಯದಲ್ಲಿ, ಬಸ್‌ನಲ್ಲಿ 40 ಪ್ರಯಾಣಿಕರಿದ್ದರು ಮತ್ತು ಡಿಕ್ಕಿಯ ನಂತರ ಟ್ರಕ್‌ನಲ್ಲಿದ್ದ ಜಲ್ಲಿಕಲ್ಲುಗಳ ಹೊರೆ ಪ್ರಯಾಣಿಕರ ಮೇಲೆ ಬಿದ್ದಿತು. ಬಸ್ಸಿನಿಂದ ಶವಗಳನ್ನು ಮತ್ತು ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಸ್ಥಳಾಂತರಿಸುತ್ತಿದ್ದೇವೆ. ಎರಡೂ ಬದಿಗಳಲ್ಲಿ ಸಂಚಾರವನ್ನು ತಿರುಗಿಸಲಾಗುತ್ತಿದೆ” ಎಂದು ಡಿಸಿಪಿ ಹೇಳಿದರು.



Powered by Blogger.