ಉಡುಪಿ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!
ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಡುಪಿ ಮೂಲದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.
ಉಡುಪಿ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಡುಪಿ ಮೂಲದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪ್ರೇಕ್ಷಾ (22) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.ಪಡುಬಿದ್ರಿ ನಡ್ಸಾಲು ಬಿಲ್ಲಿತೋಟ ನಿವಾಸಿ 22 ವರ್ಷದ ಪ್ರೇಕ್ಷಾ ಮಂಗಳೂರಿನ ವಾಮಂಜೂರಿನ ಖಾಸಾಗಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಪರೀಕ್ಷೆ ಮುಗಿಸಿ ಮನೆಯತ್ತ ಹೊರಟಿದ್ದಳು. ಮಂಗಳೂರು ಕಡೆ ಹೋಗುವ ಸರ್ವಿಸ್ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಬಂದ ಗೂಡ್ಸ್ ಟೆಂಪೊ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಗಾಯವಾಗಿತ್ತು. ಸಾರ್ವಜನಿಕರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದರು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ದಾರುಣ ಅಂತ್ಯ ಕಂಡಿದ್ದಾಳೆ.ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತೀರಾ ಬಡ ಕುಟುಂಬದಿಂದ ಬಂದ ಆಕೆ ತಂದೆಯನ್ನು ಕಳೆದುಕೊಂಡಿದ್ದರು. ಇದೀಗ ಬಾಳಿ ಬೆಳಗಬೇಕಾಗಿದ್ದ ಪ್ರೇಕ್ಷಾ ಳ ಅಗಲುವಿಕೆಯಿಂದ ತಾಯಿ, ಸಹೋದರ ಅನಾಥರಾಗಿದ್ದಾರೆ.

Post a Comment