ಮುಂಬೈ:- ಲಿಫ್ಟ್ ಕೊಡ್ತೀನಿ ಎಂದು ಕಾರು ಹತ್ತಿಸಿಕೊಂಡು ಕೊಂದೇ ಬಿಟ್ಟ, ದೇಹ ಒಳಗಿಟ್ಟು ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ್ರೂ ಸಿಕ್ಕಿಬಿದ್ದ
ಆದರೆ ನಡೆದಿರುವ ಘಟನೆಯೇ ಬೇರೆ, ಈ ಗಣೇಶ್ ಚೌಹಾಣ್ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವನಿಗೆ ಲಿಫ್ಟ್ ಕೊಡುತ್ತೀನಿ ಎಂದು ಹತ್ತಿಸಿಕೊಂಡು ಕೊಂದೇ ಬಿಟ್ಟಿದ್ದ. ಬಳಿಕ ಆತನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಆದರೆ ಗಣೇಶ್ಗೆ ಮತ್ತೊಬ್ಬನನ್ನು ಕೊಲ್ಲುವ ಉದ್ದೇಶವಿರಲಿಲ್ಲ, ಒಟ್ಟಿನಲ್ಲಿ ತಾನು ಸತ್ತಿದ್ದೇನೆಂದು ಎಲ್ಲರೂ ತಿಳಿದುಕೊಳ್ಳಬೇಕೆಂಬ ಉದ್ದೇಶವಿದ್ದಿದ್ದು ಸ್ಪಷ್ಟವಾಗಿದೆ. ಕಾರಿನ ಮಾಲೀಕರನ್ನು ಪೊಲೀಸರು ಪತ್ತೆ ಹಚ್ಚಿದಾಗ ಅವರು ಅದನ್ನು ತಮ್ಮ ಸಂಬಂಧಿಕರೊಬ್ಬರಿಗೆ ನೀಡಿರುವುದು ಕಂಡುಬಂದಿತ್ತು. ಆ ವ್ಯಕ್ತಿ ಸಂಬಂಧಿ ಗಣೇಶ್ ಚೌಹಾಣ್ ಸಂಪರ್ಕಿಸಲು ಮುಂದಾದಾಗ ಆತ ಮನೆಗೆ ಬಂದಿಲ್ಲ, ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದೆ ಎಂದು ಪೊಲೀಸರಿಗೆ ತಿಳಿಸಲಾಯಿತು.
ಈ ಎಲ್ಲಾ ಸಂಗತಿಗಳ ಆಧಾರದ ಮೇಲೆ ಮೃತಪಟ್ಟ ವ್ಯಕ್ತಿ ಗಣೇಶ್ ಎಂಬುದು ಆರಂಭಿಕ ಊಹೆಯಾಗಿತ್ತು. ಆದರೆ ಪೊಲೀಸರ ತನಿಖೆ ಮುಂದುವರೆದಂತೆ ಪೊಲೀಸರಿಗೆ ಹಲವು ಅಂಶಗಳು ಮನವರಿಕೆಯಾಗುತ್ತಾ ಹೋಗಿತ್ತು. ಆತನಿಗೆ ಓರ್ವ ಯುವತಿ ಜತೆ ಪ್ರೀತಿ ಇದೆ ಎಂಬುದು ತಿಳಿದುಬಂದಿತ್ತು.
ಆಕೆಯನ್ನು ಸಂಪರ್ಕಿಸಿದಾಗ ಈ ಘಟನೆಯ ಬಳಿಕ ಗಣೇಶ್ ಬೇರೊಂದು ನಂಬರ್ ಬಳಸಿ ಆಕೆಗೆ ಸಂದೇಶ ಕಳುಹಿಸಿರುವುದು ತಿಳಿದುಬಂದಿತ್ತು. ಸತ್ತಿದ್ದಾನೆಂದು ಭಾವಿಸಿದ ವ್ಯಕ್ತಿ ಜೀವಂತವಾಗಿದ್ದಾನೆ ಎಂಬುದನ್ನು ಅರಿತ ಪೊಲೀಸರು ಹುಡುಕಾಟ ಆರಂಭಿಸಿದ್ದರು.
ಆ ಫೋನ್ ನಂಬರ್ ಪೊಲೀಸರನ್ನು ಕೊಲ್ಹಾಪುರಕ್ಕೆ ಕೊಂಡೊಯ್ದಿತ್ತು, ಅಲ್ಲಿ ಚೌಹಾಣ್ ಸಿಕ್ಕಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಬಗ್ಗೆ ಆತನನ್ನು ಪ್ರಶ್ನಿಸಿದಾಗ ಆತ 1 ಕೋಟಿ ರೂಗಳಜೀವ ವಿಮಾ ಪಾಲಿಸಿಯನ್ನು ಮಾಡಿಸಿದ್ದ, ಗೃಹ ಸಾಲದ ಹಣವನ್ನು ತೀರಿಸಲು ಈ ನಾಟಕವಾಡಿದ್ದ, ಅದಕ್ಕೆ ಒಂದು ಅಮಾಯಕನ ಜೀವವನ್ನು ಬಲಿ ಪಡೆದಿದ್ದ ಎಂಬುದು ತಿಳಿದುಬಂದಿದೆ.
ಶನಿವಾರ ಔಸಾದ ತುಳಜಾಪುರ ಟಿ ಜಂಕ್ಷನ್ನಲ್ಲಿ ಗೋವಿಂದ್ ಯಾದವ್ ಎಂಬ ವ್ಯಕ್ತಿಗೆ ಗಣೇಶ್ ಲಿಫ್ಟ್ ಕೊಟ್ಟಿದ್ದ. ಯಾದವ್ ಕುಡಿದ ಮತ್ತಿನಲ್ಲಿದ್ದ, ಚೌಹಾಣ್ ಇದರ ಲಾಭವನ್ನು ಪಡೆದಿದ್ದ.ಆತ ಕಾರನ್ನು ನಿಲ್ಲಿಸಿ ಯಾದವ್ಗೆ ಊಟ ತಂದುಕೊಟ್ಟಿದ್ದ, ಊಟದ ಬಳಿಕ ಯಾದವ್ ನಿದ್ರೆಗೆ ಜಾರಿದ್ದ, ಬಳಿಕ ಕೊಲೆ ಮಾಡಿದ್ದ.

Post a Comment