".

Header Ads

ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ, ಚಪ್ಪಲಿ ಹಾರಹಾಕಿ ಮೆರವಣಿಗೆ

 


ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ನೆರವಾಗಬೇಕಿದ್ದ ಶಿಕ್ಷಕನೇ  ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ವರ್ತಿಸಿ, ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಗ್ರಾಮದ ಜನ ಶಿಕ್ಷಕನ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಇಂದು (ಡಿ.10) ಶಾಲೆಯ ಬಳಿ ಸುತ್ತುವರೆದ ಜನರು, ಶಿಕ್ಷಕನಿಗೆ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಇಡೀ ಗ್ರಾಮವೇ ನೋಡುವಂತೆ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದ ಪೊಲೀಸ್ ಠಾಣೆವರೆಗೂ ಮೆರವಣಿಗೆ ಕರೆತಂದಿದ್ದಾರೆ.ಹಾವೇರಿಯ ಸವಣೂರು ಪಟ್ಟಣದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ಹೀಗೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆಕ್ರೋಶಗೊಂಡ ಪೋಷಕರು ಶಾಲೆಗೆ ತೆರಳಿ ಶಿಕ್ಷಕನಿಗೆ ಧರ್ಮದೇಟು ಕೊಟ್ಟಿದ್ದಾರೆ, ಬಳಿಕ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಿ ಸವಣೂರು ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.

Powered by Blogger.