ಅಶ್ವತ್ಥರಾಮ್ ರಾಥೋಡ್ ಅವರು ಹೈಕೋರ್ಟ್ ತಿರಸ್ಕರಿಸಿದ್ದ ತಮ್ಮ ಅರ್ಜಿ ವಿರುದ್ಧ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆಯಲ್ಲಿ ಈ ನೋಟಿಸ್ ನೀಡಲಾಗಿದೆ. ಪ್ರಿಯಾಂಕ್ ಖರ್ಗೆ ಅವರ ಚುನಾವಣೆ ಅಸಿಂಧುವಾಗಿದೆ ಎಂದು ಘೋಷಿಸಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.
ಅರ್ಜಿದಾರರ ಆರೋಪಗಳ ಪ್ರಕಾರ, ಪ್ರಿಯಾಂಕ್ ಖರ್ಗೆ ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಅಸಮರ್ಪಕ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಪರಿಶಿಷ್ಟ ಜಾತಿ ಪ್ರಮಾಣಪತ್ರದ ಬದಲಿಗೆ, ಅವರು ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಂದುವ ಜಾತಿ-ಆದಾಯ ಪ್ರಮಾಣಪತ್ರವನ್ನು 2021ರ ದಿನಾಂಕದಲ್ಲೇ ಸಲ್ಲಿಸಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಶೈಕ್ಷಣಿಕ ಅರ್ಹತೆಯ ದಾಖಲೆಗಳಲ್ಲಿಯೂ ತಪ್ಪು-ತಿದ್ದಾಟ ನಡೆದಿದೆ ಎಂದು ದೂರು ನೀಡಲಾಗಿದೆ.
ಇದರ ಜೊತೆ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಆಮಿಷವಾಗಿ ಬಳಕೆ ಮಾಡಲಾಗಿದೆ, ಇದು “ಲಂಚ ಮತ್ತು ಭ್ರಷ್ಟಾಚಾರಕ್ಕೆ ಸಮ” ಎಂದು ಅರ್ಜಿದಾರರು ಕೋರ್ಟ್ಗೆ ತಿಳಿಸಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಈಗಾಗಲೇ ನೋಟಿಸ್ ನೀಡಿ, ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ವಾದಗಳನ್ನು ಆಲಿಸಲಿದೆ. ಈ ಪ್ರಕರಣದ ಮುಂದಿನ ವಿಚಾರಣೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
Post a Comment