ಪ್ರವಾಸಕ್ಕೆಂದು ಬಂದಿದ್ದ 4 ವರ್ಷದ ಬಾಲಕಿ ಚಾರಣಕ್ಕೆ ಹೋದ ವೇಳೆ ನಾಪತ್ತೆ
ಇತ್ತೀಚಿಗಷ್ಟೆ ಶರಣ್ಯ ಎಂಬ ಕೇರಳ ಮೂಲದ ಯುವತಿ ಚಾರಣಕ್ಕೆಂದು ಹೋದ ವೇಳೆ ನಾಪತ್ತೆಯಾಗಿ 4 ದಿನಗಳ ಬಳಿಕ ಪತ್ತೆಯಾಗಿದ್ದಳು. ಇನ್ನೂ ಈ ಘಟನೆಯ ಬೆನ್ನಲೆ ಇದೀಗ ಇಂತದ್ದೇ ಒಂದು ಘಟನೆ ನಡೆದಿದೆ.
40 ಜನರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಕೇರಳ ಮೂಲದ 14 ವರ್ಷದ ಶ್ರೀ ನಂದಾ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದಾಳೆ. ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಮಂಗಳವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಕಾಣೆಯಾಗಿದ್ದಾಳೆ.
ತಕ್ಷಣ ಸ್ಥಳಿಯರು, ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಆಕೆಯ ಯಾವ ಸುಳಿವು ಸಿಗಲಿಲ್ಲ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದರು.
40 ಜನರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಕೇರಳ ಮೂಲದ 14 ವರ್ಷದ ಶ್ರೀ ನಂದಾ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದಾಳೆ. ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಮಂಗಳವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಕಾ*ಣೆಯಾಗಿದ್ದಾಳೆ.
ತಕ್ಷಣ ಸ್ಥಳಿಯರು, ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಆಕೆಯ ಯಾವ ಸುಳಿವು ಸಿಗಲಿಲ್ಲ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದರು.

Post a Comment